Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನರು ಗುಂಪಾಗಿದ್ದದರಿಂದ ಮೈಮೇಲೆ ಬಿದ್ದು ನೂಕಾರೆಂದು ಆತನು ತನಗೆ ಒಂದು ದೋಣಿಯು ಸಿದ್ಧವಾಗಿರಲಿ ಎಂಬದಾಗಿ ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಈ ಜನಸಮೂಹವನ್ನು ನೋಡಿ ಅವರು ತನ್ನ ಮೈಮೇಲೆ ಬಿದ್ದು ನೂಕಬಹುದೆಂದು ತನಗಾಗಿ ಒಂದು ಚಿಕ್ಕ ದೋಣಿಯನ್ನು ತಂದು ಅದನ್ನು ಸಿದ್ದಪಡಿಸುವಂತೆ ತನ್ನ ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಮುಂದರಾಚ್ಯಾ ದಂಡೆಕ್ ಜೆಜು ಲೊಕಾಕ್ನಿ ಸಿಕ್ವುತಲೆ ಜೆಜು ಹಿ ಲೊಕಾ ಅಪ್ನಾಚ್ಯಾ ಆಂಗಾರ್ ಪಡುನ್ ಮಾಕಾ ಹಿಚಕ್ತಿಲ್, ಮನುನ್ ಅಪ್ನಾಚ್ಯಾ ಶಿಸಾಕ್ನಿ, ಅಪ್ನಾಕ್ ಬಸುಕ್ ಎಕ್ ಢೊನ್ ಹಾನುನ್, ತಯಾರ್ ಕರುನ್ ಥವ್ಕ್ ಲಾವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:9
9 ತಿಳಿವುಗಳ ಹೋಲಿಕೆ  

ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.


ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು


ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.


ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.


ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.


ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.


ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.


ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.


ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು