Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಅವರಿಗೆ - ದೇವರ ರಾಜ್ಯದ ಗುಟ್ಟು ನಿಮಗೇ ಕೊಟ್ಟಿದೆ; ಹೊರಗಿನವರಿಗೆ ಎಲ್ಲವೂ ಸಾಮ್ಯದ ಮರೆಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು, “ದೇವರ ರಾಜ್ಯದ ಸತ್ಯದ ಗುಟ್ಟನ್ನು ನೀವು ಮಾತ್ರ ತಿಳಿದುಕೊಳ್ಳತಕ್ಕದ್ದು. ಆದರೆ ಇತರ ಎಲ್ಲಾ ಜನರಿಗೆ ನಾನು ಸಾಮ್ಯಗಳ ಮೂಲಕವಾಗಿ ಎಲ್ಲವನ್ನೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಜೆಜುನ್ “ದೆವಾಚ್ಯಾ ರಾಜಾಚೊ ಖರೊ ಘುಟ್, ತುಮ್ಕಾ ದಿಲ್ಲೊ ಹಾಯ್, ಖರೆ, ದುಸ್ರಿ ಲೊಕಾ ತೆ, ಕಾನಿಚ್ಯಾ ವೈನಾ ಆಯಿಕ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:11
20 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.


ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.


“ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.


ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?


ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?


ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:


ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು