Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಜನರೆಲ್ಲರು ಸಮುದ್ರದ ಹತ್ತರ ನೆಲದ ಮೇಲೆ ಇದ್ದರು. ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶ ಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ದೋಣಿಯಲ್ಲಿ ಕುಳಿತುಕೊಂಡು ಅವರಿಗೆ ಅನೇಕ ಸಾಮ್ಯಗಳ ಮೂಲಕ ಉಪದೇಶಿಸಿದನು. ಆತನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಪಾನಿಯಾಚ್ಯಾ ದಂಡೆ ಪತರ್ ಲೊಕಾ ಜಿಮ್ನಿರ್ ಬಸಲ್ಲಿ. ತನ್ನಾ ಜೆಜುನ್ ಕಾನಿಯಾಂಚ್ಯಾ ವೈನಾಚ್, ಸುಮಾರ್ ವಿಶಯ್ ಶಿಕ್ವುಲ್ಯಾನ್. ಶಿಕ್ವುತಾನಾ ಜೆಜುನ್ ಹಿ ಕಾನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:2
15 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”


ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?


ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.


ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.


ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,


“ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.


ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.


“ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.


ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.


ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು