Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆನಿ, ಜೆಜುಚ್ಯಾ ಫಾಳ್‍ಯಾಕ್ನಿ ಹಾತ್‍ಲಾವಲ್ಲ್ಯಾ ತನ್ನಾಚ್, ತಿಚೆ, ರಗಾತ್‍ ಜಾತಲೆ, ಬಂದ್‍ಹೊಲೆ. ತಿಕಾ, ಅಪ್ನಿ ಆರಾಮ್ ಹೊವ್ನ್, ಹ್ಯಾ ಕಸ್ಟಾತ್ನಾ ಭಾಯ್ರ್ ಪಡ್ಲೊ, ಮನುನ್ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:29
14 ತಿಳಿವುಗಳ ಹೋಲಿಕೆ  

ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.


ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.


ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,


ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.


ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


“ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,


ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.


ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.


ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,


“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು