Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಜೆಜುನ್ “ಬಾಯಿ! ತುಜ್ಯಾ ವಿಶ್ವಾಸಾನ್ ತಿಯಾ ಅರಾಮ್ ಹೊಲೆ, ಸಮಾದಾನಾನ್ ಜಾ ಅನಿ ತುಜೊ ಕಸ್ಟ್ ಸರ್ಲೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:34
19 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.


ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.


ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.


ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.


ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.


ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;


ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.


ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.


ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು.


ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.


ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.


ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.


ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.


ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.


ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು?


“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು