Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮತ್ತು ಅರಸನಾದ ಹೆರೋದನು [ಯೇಸುವಿನ ಸುದ್ದಿಯನ್ನು] ಕೇಳಿದನು. ಯಾಕಂದರೆ ಆತನ ಹೆಸರು ಪ್ರಸಿದ್ಧವಾಯಿತು, ಮತ್ತು ಜನರು ಆತನ ವಿಷಯದಲ್ಲಿ - ಸ್ನಾನಿಕನಾದ ಯೋಹಾನನೇ ತಿರಿಗಿ ಬದುಕಿಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆರೊದ್ ರಾಜಾನ್ ಹೆಚ್ಯಾ ವಿಶಯಾತ್ ಆಯ್ಕ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಜೆಜುಚಿ ಖಬರ್ ಸಗ್ಳ್ಯಾಕ್ಡೆ ಫರ್ಗಟಲ್ಲಿ. ಥೊಡೆಜಾನಾ “ಬಾಲ್ತಿಮ್‍ ದಿತಲೊ ಜುವಾಂವ್ ಮರಲ್ಲೊ ಅನಿ ಝಿತ್ತೊ ಹೊವ್ನ್ ಯೆಲಾ! ತಸೆ ಮನುನ್ ತೆಕಾ ಅಜಾಪಾ ಕರ್‍ತಲೊ ಬಳ್ ಹಾಯ್” ಮನುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:14
16 ತಿಳಿವುಗಳ ಹೋಲಿಕೆ  

ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.


ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,


ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.


ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.


ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.


ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.


ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.


ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು