Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವನ ನಾಲಿಗೆಯನ್ನು ಮುಟ್ಟಿ ಆಕಾಶದ ಕಡೆಗೆ ನೋಡಿ ನಿಟ್ಟುಸುರು ಬಿಟ್ಟು ಅವನಿಗೆ - ಎಪ್ಫಥಾ ಎಂದು ಹೇಳಿದನು. ಆ ಶಬ್ದಕ್ಕೆ ತೆರೆಯಲಿ ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಬಳಿಕ ಆಕಾಶದ ಕಡೆಗೆ ನೋಡಿ, ನಿಟ್ಟುಸಿರು ಬಿಟ್ಟು, “ಎಪ್ಫಥಾ” ಎಂದು ಹೇಳಿದನು. (ಎಪ್ಫಥಾ ಎಂದರೆ “ತೆರೆಯಲಿ”)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ “ಎಪ್ಫಥಾ!” ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಸರ್‍ಗಾಕ್ ದಿಸ್ಟ್ ಲಾವುನ್ ಉಸ್ಕಾರುನ್ “ಎಫ್ಫತಾ” ಮಟ್ಲ್ಯಾನ್ ಮಟ್ಲ್ಯಾರ್ ಉಗಡ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:34
21 ತಿಳಿವುಗಳ ಹೋಲಿಕೆ  

ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.


ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.


ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.


ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,


ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.


ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.


ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.


ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.


ಯೇಸು ಕಣ್ಣೀರಿಟ್ಟನು.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.


ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.


ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು