Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಬೋಧಿಸುವದರಿಂದ ನನಗೆ ಭಕ್ತಿತೋರಿಸುವದು ವ್ಯರ್ಥ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇವರು ನನ್ನನ್ನು ಆರಾಧಿಸುವುದು ಕೇವಲ ವ್ಯರ್ಥ. ಏಕೆಂದರೆ ಮಾನವ ನಿಯಮಗಳನ್ನೇ ಇವರು ಬೋಧಿಸುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನುಷ್ಯರ ಆಜ್ಞೆಗಳನ್ನೇ ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹಿ ಮಾನ್ಸಾ ಮಾಜಿ ಭಜನ್ ಕರುನ್ ಕಾಯ್ ಫಾಯ್ದೊ, ಕಶ್ಯಾಕ್ ಮಟ್ಲ್ಯಾರ್ ದೆವಾಚೆ ಖಾಯ್ದೆ ಸೊಡುನ್ ಮಾನ್ಸಾನಿ ಕರಲ್ಲೆ ಖಾಯ್ದೆ ಹೆನಿ ಸಗ್ಳ್ಯಾಕ್ನಿ ಶಿಕ್ವುತ್ಯಾತ್.ಮನುನ್ ಸಾಂಗಲ್ಲೆ ಖರೆ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:7
15 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.


ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.


ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.


ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.


ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.


ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?


ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?


ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು