ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.