Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನಿಗೊಂದು ಮೂಗದೆವ್ವ ಹಿಡಿದದೆ; ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ಕೆಡವುತ್ತದೆ; ಆಗ ಅವನು ನೊರೆ ಸುರಿಸುತ್ತಾ ಕರಕರನೆ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಹೇಳಿಕೊಂಡೆ; ಅವರ ಕೈಯಿಂದ ಆಗದೆಹೋಯಿತು ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊ ಗಿರೊ ತೆಕಾ ಅಂಗಾತ್ ಚಡಲ್ಲ್ಯಾ ತನ್ನಾ ತೆಕಾ ಜಿಮ್ನಿಕ್ ಪಾಡ್ವುತಾ, ತೊ ತೊಂಡಾತ್ನಾ ಫೆನ್ ಕಾಡ್ತಾ ಅನಿ ಕಟ್ಕಟ್ ದಾತಾ ಚಾವ್ತಾ, ತೆಚೆ ಆಂಗ್ ಶೆಡ್ದುನ್ ಘಟ್ ಹೊತಾ. ತ್ಯಾ ಗಿರ್‍ಯಾಕ್ ಕಾಡಾ ಮನುನ್ ತುಜ್ಯಾ ಶಿಸಾಕ್ನಿ ಮಿಯಾ ಸಾಂಗ್ಲೊ, ಖರೆ ತೆ ತೆಂಚೆನ್ ಹೊವ್ಕ್ ನಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:18
16 ತಿಳಿವುಗಳ ಹೋಲಿಕೆ  

ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.


ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.


ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.


ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.


ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.


ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.


ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.


ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು