Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಕ್ಕಾತನು - ಎಲಾ, ನಂಬಿಕೆಯಿಲ್ಲದಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಜೆಜುನ್ ಶಿಸಾಕ್ನಿ“ತುಮ್ಕಾ ವಿಶ್ವಾಸುಚ್ ನಾ! ಅಜುನ್‍ಬಿ ಕವ್ಡೊ ಎಳ್ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹವ್ಚೆ? ಮಿಯಾ ಕವ್ಡೊ ಎಳ್ ತುಮ್ಕಾ ಸೊಸುನ್ ಘೆವ್ನ್ ಜವ್ಚೆ? ತ್ಯಾ ಪೊರಾಕ್ ಮಾಜೆಕ್ಡೆ ಘೆವ್ನ್ ಯೆವಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:19
17 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?


ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.


ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.


ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?


ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.


ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.


ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು