Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಲೊಕಾಂಚೊ ತಾಂಡೊ ಅಪ್ನಾಕ್ಡೆ ಯೆವ್ನ್ ಜಮ್ತಲೆ ಜೆಜುನ್ ಬಗಟ್ಲ್ಯಾನ್. ತಸೆ ಮನುನ್ ತೆನಿ ತ್ಯಾ ಗಿರ್‍ಯಾಕ್ “ಯೆ, ಬೊಲಿನಸಿ ಸರ್ಕೆ ಅನಿ ಆಯ್ಕಿನಸಿ ಸರ್ಕೆ ಕರ್‍ತಲ್ಯಾ ಗಿರ್‍ಯಾ, ಹ್ಯಾ ಪೊರಾತ್ನಾ ಭಾಯ್ರ್ ಪಡ್ ಅನಿ ಕನ್ನಾಬಿ ತೆಚ್ಯಾ ಭುತ್ತುರ್ ಜವ್ನಕೊ!” ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:25
17 ತಿಳಿವುಗಳ ಹೋಲಿಕೆ  

ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.


ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.


ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.


ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.


ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.


ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.


ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.


ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.


ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.


ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.


ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.


ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು