Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಒಡೆಯುವವನು ಅವರ ಮುಂದೆ ಹೊರಟಿದ್ದಾನೆ; ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ; ಅವರ ಅರಸನು ಅವರ ಮುಂದೆ ತೆರಳಿದ್ದಾನೆ, ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:13
36 ತಿಳಿವುಗಳ ಹೋಲಿಕೆ  

ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.


ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.


ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.


ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?


ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.


“ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು