Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:12
18 ತಿಳಿವುಗಳ ಹೋಲಿಕೆ  

“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ


ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.


ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.


ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.


ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.


ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.


ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.


“ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ.


ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು