Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಷ್ಟೆಲ್ಲಾ ನಡಿಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು; ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:4
26 ತಿಳಿವುಗಳ ಹೋಲಿಕೆ  

ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು


“ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.


ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.


ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?


ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.


ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.


ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.


ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು