Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:4
25 ತಿಳಿವುಗಳ ಹೋಲಿಕೆ  

“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.


ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.


“‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.


“‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.


ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.


ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.


ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.


ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.


ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.


ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.


ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”


ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,


ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.


ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.


ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.


ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು