Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ಕೋಟೆಕೊತ್ತಲಗಳನ್ನು ಕೆಡವಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ದೇಶದಲ್ಲಿರುವ ಪಟ್ಟಣಗಳನ್ನು ಹಾಳುಮಾಡುವೆನು. ನಿನ್ನ ಕೋಟೆಗಳನ್ನೆಲ್ಲಾ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ದೇಶದ ಪಟ್ಟಣಗಳನ್ನು ನಾಶಮಾಡಿಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:11
10 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ.


ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.


ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು