Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:7
40 ತಿಳಿವುಗಳ ಹೋಲಿಕೆ  

ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.


ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.


ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.


ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.


ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.


ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.


ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”


ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.


ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.


ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.


ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.


ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.


ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.


ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.


ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು