Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೇಳುವುದನ್ನು ಕೇಳಿರಿ, “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು. ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯಹಾಕು, ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ ಎಂದು ಯೆಹೋವನು [ನನಗೆ] ನುಡಿಯುವದನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದನ್ನು ಕೇಳಿರಿ: “ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; ನೀನು ಹೇಳುವುದನ್ನು ಗುಡ್ಡಗಳು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:1
22 ತಿಳಿವುಗಳ ಹೋಲಿಕೆ  

ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!


ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.


ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.


“ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.


ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.


ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.


ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು.


ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.


ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.


ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, “ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, ‘ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ’.


ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.


ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,


ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು.


ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.


ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”


ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”


ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.


‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು