Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಬಿತ್ತಿದರೂ ಕೊಯ್ಯುವದಿಲ್ಲ; ಎಣ್ಣೆಯ ಕಾಯಿಯನ್ನು ತುಳಿದರೂ ಮೈಗೆ ಎಣ್ಣೆ ಹಚ್ಚಿಕೊಳ್ಳುವದಿಲ್ಲ, ದ್ರಾಕ್ಷೆಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:15
14 ತಿಳಿವುಗಳ ಹೋಲಿಕೆ  

ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.


‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.


ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ!


ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು