Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:16
31 ತಿಳಿವುಗಳ ಹೋಲಿಕೆ  

ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.


ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.


ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,


ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.


ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.


ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.


ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.


ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.


ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.


ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು