Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:19
36 ತಿಳಿವುಗಳ ಹೋಲಿಕೆ  

ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”


ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.


ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.


ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.


ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ.


ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.


ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.”


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.


ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.


ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.


ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.


ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು