Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ದಿಸ್ ಉಗಾವಲ್ಲ್ಯಾ ತನ್ನಾ ತೊ ಅಪ್ನಾಚ್ಯಾ ಝಳಾನಿ ಗವ್ತಾಕ್ ಬಾಡುನ್ ಜಾಯ್ ಸಾರ್ಕೆ ಕರ್ತಾನಾ, ತ್ಯಾ ಗವ್ತಾಚೆ ಫುಲ್ಲ್‌ಬಿ ಝಡುನ್ ಜಾವ್ನ್ ತೆಚ್ಯಾ ರುಪಾಚೆ ಬರೆಪಾನ್ ನಾಸ್ ಹೊವ್ನ್ ಜಾತಾ. ತಸೆಚ್ ಸಾವ್ಕಾರ್ಕಿಬಿ ಅಪ್ಲ್ಯಾ ವಾಟೆ ವೈನಿ ಬಾವುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:11
27 ತಿಳಿವುಗಳ ಹೋಲಿಕೆ  

ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.


ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.


ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.


ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.


ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.


ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!


ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.


ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿಹೋದ ಹುಲ್ಲಿನಂತಿದ್ದೇನೆ.


ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.


ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!


‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.


ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು