Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಪರಿಕ್ಷಾ ಸೊಸುನ್ ಘೆತಲೊ ಮಾನುಸ್ ಧನ್ಯ್, ತೊ ಪರಿಕ್ಷಾ ಸೊಸುನ್ ಘೆಟಲ್ಲ್ಯಾ ಮಾನಾ ಧನಿಯಾನ್ ಅಪ್ನಾಚ್ಯಾ ಪ್ರೆಮಾಚ್ಯಾ ಲೊಕಾಕ್ನಿ ದಿಲ್ಲೊ ಜಿವನಾಚೊ ಮುಕುಟ್ ಅಪ್ನಾಚೊ ಕರುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:12
49 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.


ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.


ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ


ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.


ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.


ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು


ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.


ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.


ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.


ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”


ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.


ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.


ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.


ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.


“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.


ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು