Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಪ್ರತಿಯೊಬ್ಬನೂ ತನ್ನಲ್ಲಿರುವ ಆಶಾಪಾಶದಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಪ್ರೇರೇಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಶೋಧನೆಗೆ ಗುರಿಯಾಗಿರುವವನು ತಾನು ಇಷ್ಟಪಡುವ ಕೆಟ್ಟಕಾರ್ಯಗಳಿಂದಲೇ ಶೋಧನೆಗೆ ಒಳಗಾಗಿದ್ದಾನೆ. ಅವನ ಕೆಟ್ಟ ಆಸೆಗಳೇ ಅವನನ್ನು ದೂರ ಸೆಳೆದು, ಬಿಡದೆ ಹಿಡಿದುಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಹರ್ ಎಕ್ಲೊಬಿ ಅಪ್ಲ್ಯಾ ಸ್ವತಾಚ್ಯಾ ಬುರ್ಶ್ಯಾ ಆಶಾತ್ ಪಡುನ್ ಮಳ್ಳ್ ಹೊವ್ನ್ ಪರಿಕ್ಷಾತ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:14
24 ತಿಳಿವುಗಳ ಹೋಲಿಕೆ  

ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.


ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.


ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.


ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.


ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.


ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ,


ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,


ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು.


ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?


ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.


ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.


ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.


ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.


ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು