Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರ್‍ಯಾ ಗೊಸ್ಟಿಚ್ಯಾ ವೈನಾ ದೆವಾನ್ ಅಮ್ಕಾ ಜಿವನ್ ದಿಲ್ಯಾನ್, ಅಸೆ ತೆನಿ ರಚಲ್ಲ್ಯಾ ಸಗ್ಳ್ಯಾಚ್ಯಾ ಮದ್ದಿ ಅಮಿ ಪೈಲೆಚೆ ಹೊವ್‍ಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:18
24 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.


ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”


ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.


ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.


ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,


ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.


ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.


ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.


ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.


ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.


ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು