Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಟ್ಟು ಕೇಳಿಕೊಳ್ಳಬೇಕು. ಸಂದೇಹಪಡುವವನೋ ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆಯಂತೆ ಅಲೆಯುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಉಲ್ಲೊಬಿ ಸಂಶೆವ್ ನಸ್ತಾನಾ ವಿಶ್ವಾಸಾನ್ ಮಾಗುಂದಿತ್, ಕಶ್ಯಾಕ್ ಮಟ್ಲ್ಯಾರ್ ಸಂಶೆವ್ ಕರ್ತಲೊ, ಸಂಮುದರಾತ್ ವಾರ್‍ಯಾನ್ ಮಾರ್ ಖಾಲ್ಲ್ಯಾ ಲಾಟಾಂಚ್ಯಾ ಸಾರ್ಕೊ ಫಿರುನ್ಗೆತ್‍ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:6
14 ತಿಳಿವುಗಳ ಹೋಲಿಕೆ  

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.


ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,


ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ” ಎಂದು ಹೇಳಿದನು.


ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು