Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಶಾಸ್ತ್ರದ ಮಾತು ಹೀಗೆ ನೆರವೇರಿತು, ಮತ್ತು ದೇವರ ಸ್ನೇಹಿತನೆಂಬ ಹೆಸರು ಅವನಿಗೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಅಸೆ “ಅಬ್ರಾಹಾಮಾನ್ ದೆವಾಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನ್ ತೆಚ್ಯಾ ವೈನಾ ದೆವಾನ್ ತೆಕಾ ನಿತಿವಂತ್ ಮನುನ್ ಸ್ವಿಕಾರ್ ಕರ್ಲ್ಯಾನ್” ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಪುರಾ ಹೊಲೆ ಅನಿ ಅಸೆ ಅಬ್ರಾಹಾಮ್ ದೆವಾಚೊ ವಾಂಗ್ಡಿ ಮನುನ್ ಬಲ್ವುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:23
22 ತಿಳಿವುಗಳ ಹೋಲಿಕೆ  

ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.


ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.


ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.


ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.


ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.


ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,


ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.


“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.


“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.


ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.


ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು