Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ತುಮಿ ತ್ಯಾ ಗರಿಬಾಕ್ನಿ ಮಾನ್ ದಿಲ್ಲ್ಯಾಸಿ ನಾ ಸಾವ್ಕಾರ್ ಲೊಕಾ ತುಮ್ಕಾ ತುಡ್ವುತಾತ್ ಅನಿ ವೊಡುನ್ ಚವ್ಕಸಿ ಕರ್ತಲ್ಯಾ ಜಾಗ್ಯಾಕ್ ನ್ಹೆತಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:6
38 ತಿಳಿವುಗಳ ಹೋಲಿಕೆ  

ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.


ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.


ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.


ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’


ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.


ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;


ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ.


ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.


ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.


ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.


ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ.


ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.


ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು