Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದನ್ನು ಬಿಟ್ಟು ಪಕ್ಷಪಾತ ತೋರಿಸುವವರಾಗಿದ್ದರೆ ನೀವು ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದಿಂದ ತೀರ್ಮಾನಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತುಮಿ ಭೆದ್-ಭಾವ್ ಕರ್ತ್ಯಾಸಿ ಹೊಲ್ಯಾರ್, ಪಾಪ್ ಕರ್ತ್ಯಾಸಿ ಅನಿ ಖಾಯ್ದ್ಯೊ ಮೊಡಲ್ಲ್ಯಾಂಚ್ಯಾ ಸಾರ್ಕೆ ಹೊವ್ನ್ ಚುಕಿದಾರ್ ಮನುನ್ ಘೆತ್ಯಾಶಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:9
13 ತಿಳಿವುಗಳ ಹೋಲಿಕೆ  

“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.


ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.


ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ?


ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.


ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,


ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು