Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿನವಾದ ತೀರ್ಪು ಆಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮ್ಚ್ಯಾತ್ ಲೈ ಲೊಕಾ, ಶಿಕ್ವುತಲೆ ಹೊತಲೆ ನಕ್ಕೊ. ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾ ಶಿಕ್ವುತಲ್ಯಾಂಚಿ ಲೈ ಬರ್ಯಾ ರಿತಿನ್ ಚವ್ಕಸಿ ಕರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:1
30 ತಿಳಿವುಗಳ ಹೋಲಿಕೆ  

ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.


ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.


ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.


ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?


“ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.


“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.


ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.


ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು