Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ತುಮ್ಚ್ಯಾ ಮನಾತ್ನಿ ತುಮಿ ಬುರ್ಶಿ ಇರ್ಸ್ಯಾ, ಕುಸ್ಡೆಪಾನ್, ಸ್ವಾರ್ಥ್ ರಾಲ್ಯಾರ್, ತುಮ್ಚ್ಯಾ ಬುದ್ವಂತ್ಕಿಚ್ಯಾ ಮೊಟೆ ಪಾನಾಚ್ಯಾ ವಿಶಯಾತ್ ಬೊಲುನ್ ಖರ್ಯಾಚ್ಯಾ ವಿಶಯಾತ್ ಪಾಪ್ ಕರುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:14
42 ತಿಳಿವುಗಳ ಹೋಲಿಕೆ  

ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.


ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.


ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?


ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.


ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.


ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;


ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.


ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.


ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?


ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.


ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.


ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.


ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,


ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.


ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.


ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.


ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.


ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.


ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,


ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.


ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.


ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು