Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್, ಅಮಿ ಸಗ್ಳಿ ಲೊಕಾ ಲೈಂದಾ ಚುಕುನ್ ಪಡ್ತಾವ್, ಬೊಲ್ನ್ಯಾತ್ ಸಮಾ ಹೊತ್ತೊ ಸಗ್ಳ್ಯಾ ಬರ್ಯಾ ಗುನಾನಿ ಭರುನ್ ರ್‍ಹಾತಾ ಅನಿ ಅಪ್ನಾಚ್ಯಾ ಅಂಗಾಕ್ ಹತೊಟಿತ್ ಥವ್ನ್ ಘೆತಲೊ ಬಳ್‌ಬಿ ತೆಕಾ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:2
29 ತಿಳಿವುಗಳ ಹೋಲಿಕೆ  

ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.


ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.


ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.


ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.


“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;


ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.


“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.


“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ,


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.


“ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.


ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.


ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.


ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು