Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಹುಟ್ಟುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ಭೋಗಾಶೆಗಳಿಂದಲೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಬುರ್ಶ್ಯಾ ಸುಖಾನಿ ರ್‍ಹಾವ್ಚೆ ಮನ್ತಲ್ಲ್ಯಾ ಆಶಾಂಚ್ಯಾ ವೈನಾ ಝುಡ್ಗೆ ಅನಿ ಮಾರಾ ಮಾರಿ ಹೊತಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:1
24 ತಿಳಿವುಗಳ ಹೋಲಿಕೆ  

ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.


ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.


ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.


ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.


ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು