Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಭಾವಾನು ಅನಿ ಭೆನಿಯಾನು, ಎಕಾಮೆಕಾಚ್ಯಾ ವಿಶಯಾತ್ ಬುರ್ಶಿ ಗೊಸ್ಟಿಯಾ ಬೊಲುನಕಾಸಿ, ಅಸೆ ಅನಿಎಕ್ಲ್ಯಾಚ್ಯಾ ವಿರೊದ್ ಬುರ್ಶೆ ಬೊಲ್ತಲೊ ನಾತರ್ ಝಡ್ತಿ ಕರ್ತಲೊ ಖಾಯ್ದ್ಯಾಂಚ್ಯಾ ವಿರೊದ್ ವಾಯ್ಟ್ ಬೊಲ್ತಾ ಅನಿ ವಿರೊದ್ ಕರ್ತಾ. ಅಸೆ ಹೊವ್ನ್ ತುಮಿ ಖಾಯ್ದೆ ಪಾಳ್ತಲೆ ನ್ಹಯ್ ಝಡ್ತಿ ಕರ್ತಲೆ ಹೊವ್ನ್ ಹಾಸಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:11
24 ತಿಳಿವುಗಳ ಹೋಲಿಕೆ  

ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.


ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.


ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.


“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.


ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.


ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.


ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,


ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.


ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.


ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.


ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.


ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು