Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲೆಗಾರರಾಗುವಷ್ಟು ಹೊಟ್ಟೆಕಿಚ್ಚು ಪಟ್ಟಾದರೂ ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಯುದ್ಧಮಾಡುತ್ತೀರಿ. ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ದೆವಾಕ್ಡೆ ಲೈ ಮಾಗ್ತ್ಯಾಸಿ ತೆ ತುಮ್ಕಾ ಗಾವಿನಾ, ತಸೆ ಹೊವ್ನ್ ತುಮಿ ಜಿವ್ ಕಾಡುಕ್ ಸೈತ್ ತಯಾರ್ ಹೊತ್ಯಾಶಿ. ಲೈ ಆಶಾ ಕರ್ತ್ಯಾಸಿ ಖರೆ ತೆ ತುಮ್ಕಾ ಗಾವಿನಾ ತಸೆ ಹೊವ್ನ್ ತುಮಿ ಝಗ್ಡೆ ಅನಿ ಮಾರಾ ಮಾರಿ ಕರ್ತ್ಯಾಸಿ ತುಮ್ಕಾ ಹೆ ಸಗ್ಳೆ ಗಾವಿನಾ. ಕಶ್ಯಾಕ್ ಮಟ್ಲ್ಯಾರ್ ತುಮಿ ಹೆ ಸಗ್ಳೆ ದೆವಾಕ್ಡೆ ಮಾಗಿನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:2
14 ತಿಳಿವುಗಳ ಹೋಲಿಕೆ  

ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.


ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.


ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.


ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.


ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.


ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು