Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿರುವ ಯಜ್ಞವೇದಿಗೆ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:5
25 ತಿಳಿವುಗಳ ಹೋಲಿಕೆ  

ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.


ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು.


ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.


ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.


“ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.


“ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.


ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.


ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.


ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.


ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು.


ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.


ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.


ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು