Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಯ ಮೂಲಕ ಇಸ್ರೇಲ್ ಜನರಿಗೆ ಕೊಟ್ಟ ಎಲ್ಲಾ ಕಟ್ಟಳೆಗಳನ್ನು ಅವರಿಗೆ ಬೋಧಿಸುವುದು ನಿನ್ನ ಜವಾಬ್ದಾರಿಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:11
16 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.


ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.


ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.


ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು.


ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.


ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.


ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು