Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸತ್ತೀರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾದೀತು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲ್ಯರ ಮನೆತನದವರೇ ದುಃಖಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:6
23 ತಿಳಿವುಗಳ ಹೋಲಿಕೆ  

ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.


ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.


ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.


ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.


ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.


“ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.


ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.


ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ.


ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.


ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.


ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.


ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.


ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು