Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನ ಅಭಿಷೇಕತೈಲ ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು, ಹೋದರೆ ಸಾಯುವಿರಿ,” ಎಂದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ದೇವದರ್ಶನದ ಗುಡಾರದ ಬಾಗಲನ್ನು ಬಿಟ್ಟು ಹೋಗಬಾರದು; ಹೋದರೆ ಸತ್ತೀರಿ ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನೀವು ದೇವದರ್ಶನಗುಡಾರದ ಬಾಗಿಲನ್ನು ಸಹ ಬಿಟ್ಟುಹೋಗಬಾರದು. ಇಲ್ಲವಾದರೆ ನೀವು ಸಾಯುವಿರಿ! ಯಾಕೆಂದರೆ, ಯೆಹೋವನ ಅಭಿಷೇಕತೈಲವು ನಿಮ್ಮ ಮೇಲಿದೆ” ಎಂದು ಹೇಳಿದನು. ಆದ್ದರಿಂದ ಆರೋನ, ಎಲ್ಲಾಜಾರ್ ಮತ್ತು ಈತಾಮಾರ್ ಮೋಶೆಯ ಮಾತಿಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಮರಣ ಹೊಂದದಂತೆ ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. ಏಕೆಂದರೆ ಯೆಹೋವ ದೇವರ ಅಭಿಷೇಕ ತೈಲವು ನಿಮ್ಮ ಮೇಲಿದೆ,” ಎಂದನು. ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:7
12 ತಿಳಿವುಗಳ ಹೋಲಿಕೆ  

ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.


ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.


ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.


ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.


ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.


ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.”


ಯೆಹೋವನು ಆರೋನನೊಂದಿಗೆ ಮಾತನಾಡಿ,


ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು