Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:40
25 ತಿಳಿವುಗಳ ಹೋಲಿಕೆ  

ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.”


ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.


ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.


“ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.


ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.


“‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.


“‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು