Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಆದರೆ ಬೂಷ್ಟು ಆ ತೊಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಆ ಬೂಷ್ಟು ಹರಡುತ್ತಿದೆ ಎಂದರ್ಥ. ಆ ತೊಗಲನ್ನು ಅಥವಾ ಆ ಬಟ್ಟೆಯನ್ನು ಸುಟ್ಟುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಆದರೆ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನಲ್ಲಾಗಲಿ ಕಂಡು ಬಂದರೆ ಅದು ಹರಡುವ ಬೂಜು ಮತ್ತು ಬೂಜಿರುವ ವಸ್ತುವನ್ನು ನೀನು ಬೆಂಕಿಯಿಂದ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:57
10 ತಿಳಿವುಗಳ ಹೋಲಿಕೆ  

ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,


ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು.


ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು