Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷ ಹೊರಿಸಿ, ಮರುಭೂಮಿಗೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ ಅದರ ಮೇಲೆ ದೋಷಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಬಲಿಪಶುವಿಗಾಗಿ ಚೀಟು ಬಿದ್ದ ಆ ಹೋತವನ್ನು ತನ್ನೊಂದಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ, ಅದನ್ನು ಬಲಿಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:10
12 ತಿಳಿವುಗಳ ಹೋಲಿಕೆ  

ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.


ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.


ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು