Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಆ ಹೋತನ ರಕ್ತದಲ್ಲಿಯೂ ಸ್ವಲ್ಪ ಸ್ವಲ್ಪ ತೆಗೆದುಕೊಂಡು ವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತರುವಾಯ ಆರೋನನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಕೆಯ ಬಳಿಗೆ ಹೋಗುವನು. ಆರೋನನು ಯಜ್ಞವೇದಿಕೆಯನ್ನು ಶುದ್ಧೀಕರಿಸುವನು. ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ಮತ್ತು ಹೋತದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಎಲ್ಲಾ ಮೂಲೆಗಳಿಗೆ ಹಚ್ಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:18
14 ತಿಳಿವುಗಳ ಹೋಲಿಕೆ  

ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.


ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.


“ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು


ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು