Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:29
28 ತಿಳಿವುಗಳ ಹೋಲಿಕೆ  

“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.


“‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.


ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.


ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.


ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.


ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.


ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.


ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,


ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.


ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.


ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.


“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”


ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.


ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;


ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.


ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.


ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.


ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು