Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸತ್ತವರಿಗಾಗಿ ಸಂತಾಪ ಸೂಚಿಸಲು ದೇಹವನ್ನು ಗಾಯಗೊಳಿಸಿಕೊಳ್ಳಬೇಡ. ಶರೀರದ ಮೇಲೆ ಹಚ್ಚೇಚುಚ್ಚಿಸಿಕೊಳ್ಳಬೇಡ. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ ‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:28
18 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.


ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.


ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.


ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.


ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.


ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.


ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.


ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,


ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.


“‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.


“‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.


ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು