Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದು ನೈವೇದ್ಯ ವಸ್ತುವಾದುದರಿಂದ ಅದರ ಮೇಲೆ ಎಣ್ಣೆ ಹೊಯ್ಯಬೇಕು; ಸಾಂಬ್ರಾಣಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದು ನೈವೇದ್ಯ ವಸ್ತುವಾದದರಿಂದ ಅದರ ಮೇಲೆ ಎಣ್ಣೆ ಹೊಯಿದು ಧೂಪವಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಅದಕ್ಕೆ ಎಣ್ಣೆಯನ್ನು ಹಾಕಿ ಅದರ ಮೇಲೆ ಧೂಪವನ್ನಿಡಬೇಕು. ಅದು ಧಾನ್ಯಸಮರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:15
7 ತಿಳಿವುಗಳ ಹೋಲಿಕೆ  

“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.


ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.


ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,


ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,


“‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.


“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.


ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು