Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾಜಕನು ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಆ ಗೋದಿ ತೆನೆಯಿಂದಲೂ, ಎಣ್ಣೆಯಿಂದಲೂ ಸ್ವಲ್ಪ ಭಾಗವನ್ನು ತೆಗೆದುಕೊಂಡು ಸಾಂಬ್ರಾಣಿಯನ್ನೆಲ್ಲ ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಸರ್ವೇಶ್ವರನಿಗೆ ಹೋಮಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಉವ್ಮಿುಗೆಯಲ್ಲಿಯೂ ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಜಕನು ಜಜ್ಜಿದ ಧಾನ್ಯದಲ್ಲಿ ಒಂದು ಭಾಗವನ್ನೂ ಎಣ್ಣೆಯನ್ನೂ ಎಲ್ಲಾ ಧೂಪವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:16
12 ತಿಳಿವುಗಳ ಹೋಲಿಕೆ  

ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.


ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.


“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.


ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು