Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದು ಸ್ವೀಕೃತವಾಗಬೇಕಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು; ಹೋರಿ, ಟಗರು ಅಥವಾ ಹೋತವೇ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19-20 ಅದು ಸ್ವೀಕೃತವಾಗುವಂತೆ ಪೂರ್ಣಾಂಗವಾದ ಹೋರಿಯನ್ನಾಗಲಿ ಟಗರನ್ನಾಗಲಿ ಹೋತವನ್ನಾಗಲಿ ಅರ್ಪಿಸಬೇಕು. ಅಂಗದೋಷವುಳ್ಳ ಯಾವುದನ್ನೂ ನೀವು ಸಮರ್ಪಿಸಬಾರದು. ಅಂಗದೋಷವುಳ್ಳವುಗಳನ್ನು ನಾನು ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಸ್ವಯಿಚ್ಛೆಯಿಂದ ಕಳಂಕರಹಿತವಾದ ಗಂಡು ಪಶು, ಕುರಿ ಅಥವಾ ಮೇಕೆಯನ್ನೇ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:19
21 ತಿಳಿವುಗಳ ಹೋಲಿಕೆ  

“‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


“‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.


ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.


ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,


ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.


“‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.


ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,


ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು