Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕುರುಡಾದದ್ದು ಕುಂಟಾದದ್ದು ಗಾಯವಾದದ್ದು ಹುಣ್ಣುಳ್ಳದ್ದು ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೂಬಾರದು, ಯಜ್ಞವೇದಿಯ ಮೇಲೆ ಹೋಮಮಾಡಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕುರುಡಾದದ್ದನ್ನಾಗಲಿ ಮೂಳೆ ಮುರಿದುಕೊಂಡದ್ದನ್ನಾಗಲಿ ಕುಂಟಾದದ್ದನ್ನಾಗಲಿ ಸ್ರಾವವುಳ್ಳದ್ದನ್ನಾಗಲಿ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲಿ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:22
9 ತಿಳಿವುಗಳ ಹೋಲಿಕೆ  

ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ.


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,


ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.


ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,


ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.


ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.


ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು